ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್ಹೌಸ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿತ್ತು. ಅಡುಗೆ ಅನಿಲ ಸೋರಿಕೆಯಿಂದಾದ ಸ್ಫೋಟದಲ್ಲಿ ಗಂಭೀರವಾಗಿ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ.
ರೈತರಿಗೆ ನಕಲಿ ಪೈಪ್ ಕೊಟ್ಟು ರೆಡ್ ಹ್ಯಾಂಡ್ ಆಗಿ ಸಿಕ್ಕಾಕೊಂಡ ಕೃಷಿ ಅಧಿಕಾರಿ
ರಾಜಸ್ಥಾನ ಜೋಧಪುರದ ಸುಭಾಸ್ ಮೋಹನರಾಮ್ (26) ಮೃತ ವ್ಯಕ್ತಿಯಾಗಿದ್ದು. ಗ್ಯಾಸ್ ಬ್ಲಾಸ್ಟ್ನಿಂದಾಗಿ ಶೇ 50ಕ್ಕಿಂತ ಹೆಚ್ಚು ಸುಟ್ಟಗಾಯಗಳಾಗಿದ್ದರಿಂದ ಸ್ಥಿತಿ ಗಂಭೀರವಾಗಿತ್ತು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನೂ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಅವರ ಕುಟುಂಬದವರು ರಾಜಸ್ಥಾನದ ತಮ್ಮ ಊರಿಗೆ ಕರೆದೊಯ್ದಿದ್ದಾರೆ. ಗ್ಯಾಸ್ ರೀಫಿಲ್ಲಿಂಗ್ ಧಂದೆಯಲ್ಲಿ ಸಹ ಇವರು ತೊಡಗಿದ್ದರು ಎನ್ನಲಾಗಿದೆ