ಉಡುಪಿ: ಕಾಪು ಶ್ರೀ ಹಳೆ ಮಾರಿಗುಡಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿ ಹೊಸ ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹತ್ತು ದಿನಗಳ ಕಾಲ ನಡೆಯುತ್ತಿರುವ ಮಾರಿಯಮ್ಮನ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಡಿಸಿಎಂ ಪಾಲ್ಗೊಂಡರು.
Limited-Time Deal: ವಿದೇಶಿ ಪ್ರವಾಸ ಮಾಡುವವರಿಗೆ ಗೋಲ್ಡನ್ ಆಫರ್: ಜಸ್ಟ್ 11 ರೂಪಾಯಿಗೆ ವಿಮಾನ ಟಿಕೆಟ್..!
ಹೊಸ ಮಾರಿಗುಡಿ ದೇಗುಲ ಪ್ರವೇಶಿಸಿದ ಡಿಕೆಶಿ, ಮಾರಿಯಮ್ಮನ ಚಿನ್ನದ ಗದ್ದುಗೆಯಲ್ಲಿ ಪ್ರತಿಷ್ಠಾಪನಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾಪು ಮಾರಿಗುಡಿಯಲ್ಲಿರುವ ಉಚ್ಚಂಗಿ ದೇವಿಯ ದರ್ಶನ ಮಾಡಿದರು. ಕೆಂಪು ಕಲ್ಲಿನಿಂದ ನಿರ್ಮಾಣ ಆಗಿರುವ ದೇಗುಲ ವೀಕ್ಷಿಸಿದರು.
ಬಾಗಲಕೋಟೆಯ ಇಳಕಲ್ನ ವಿಶಿಷ್ಟ ಕೆಂಪು ಕಲ್ಲಿನ ದೇಗುಲ ಇದಾಗಿದೆ. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಹೊಸ ಮಾರಿಗುಡಿ ಇದು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕಾಪು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸನ್ಮಾನಿಸಿದರು. ಕಾಪು ಮಾರಿಯಮ್ಮನ ಮೂರ್ತಿ, ಪ್ರಸಾದ ನೀಡಿ ಗೌರವಿಸಿದರು.