ಗದಗ:- ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ನಲ್ಲಿ ಹೊರಟಿದ್ದ ಮೂವರ ಪ್ರಾಣಪಕ್ಷಿ ಹಾರಿ ಹೋಗಿದೆ.
ಹೊಟ್ಟೆ ಗುಂಡಾಕಾರ ಆಗಿದ್ಯಾ!? ಡೋಂಟ್ ವರಿ ರಾತ್ರಿ ಇದನ್ನು ಕುಡಿದು ಮಲಗಿ!
35 ವರ್ಷದ ನಿಂಗಪ್ಪ ಮಾದರ, 45 ವರ್ಷದ ಯಮನಪ್ಪ ಮಾದರ ಮತ್ತು ಮಂಜುನಾಥಗೌಡ ಮೃತ ದುರ್ದೈವಿಗಳು ಎನ್ನಲಾಗಿದೆ. ಇವರು ಗದಗ ಜಿಲ್ಲೆ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಮೂವರು ಒಂದೇ ಬೈಕ್ ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲೇ ಹೊರಟಿದ್ದ ಮಂಜುನಾಥ್ ಗೌಡಗೆ ತೀವ್ರ ಗಾಯವಾಗಿತ್ತು. ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ ಅಪಘಾತದ ನಂತರ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿ ಆಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.