ಬೆಂಗಳೂರು:- ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಕಾನೂನು & ಸುವ್ಯವಸ್ಥೆಯಲ್ಲಿ ಸಮಸ್ಯೆಯಿಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.’
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಸೆಕ್ಯೂರಿಟಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್!
ವಿಧಾಮಂಡಲ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನ ಸ್ನೇಹಿಯಾಗಿ ಕೆಲಸ ಮಾಡ್ತಿವೆ. ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಒಟ್ಟು 39 ಪುಟಗಳ ಭಾಷಣದಲ್ಲಿ ಆರಂಭದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲೇ ಸ್ವಾಗತಿಸಿದರು. ತಮ್ಮ ಭಾಷಣದ ಉದ್ದಕ್ಕೂ ಸರ್ಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲದು ಲಿಖಿತ ಭಾಷಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ, ಹಣಕಾಸು ವ್ಯವಸ್ಥೆ ಹದಗೆಡುತ್ತಿದೆ ಎಂಬ ವಿರೋಧ ಪಕ್ಷದ ಭವಿಷ್ಯ ಸುಳ್ಳಾಗಿದೆ. ಪ್ರತಿಯೊಂದು ವಲಯದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿದೆ. ಮುಂಗಾರು, ಹಿಂಗಾರು ಹಂಗಾಮುಗಳಿಂದ ಸುಮಾರು 149 ಲಕ್ಷ ಟನ್ ಕೃಷಿ ಉತ್ಪಾದನೆ ನಿರೀಕ್ಷೆ ಮಾಡಲಾಗಿದೆ. ರೈತರ ಆತ್ಮಹತ್ಯೆ ಗಣನೀಯವಾಗಿ ಕಡಿಮೆಯಾಗಿದೆ
2024-25 ರ ಆರ್ಥಿಕ ಮೂರು ತ್ರೈಮಾಸಿಕದಲ್ಲಿ ರಾಜಸ್ವ ಸಂಗ್ರಹಣೆಯು 1,81,908 ಕೋಟಿ ತಲುಪಿದೆ. ರಾಜಸ್ವ ಸ್ವೀಕೃತಿಯಲ್ಲಿ ಶೇ 13 ರಷ್ಟು ಬೆಳವಣಿಗೆ ಸಾಧಿಸಿದೆ.
ಜನವಸತಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ 3.05 ಲಕ್ಷ ಮನೆಗಳನ್ನು 4761.15 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೆರವು ನೀಡಿದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ತಗ್ಗಿಸಲು ಮುಂದಿನ ದಿನಗಳಲ್ಲಿ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೋ ಮತ್ತು ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ. ಬೆಂಗಳೂರು ನಗರ ಹಾಗೂ ಉಪ ನಗರಗಳಿಗೆ ಹೆಚ್ಚುವರಿ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು 6 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದ್ದು, ಈ ಯೋಜನೆಗೆ 6939 ಕೋಟಿ ವೆಚ್ಚದಲ್ಲಿ ಡಿಪಿಆರ್.
ಬೆಂಗಳೂರು ಹೊರ ವಲಯದಲ್ಲಿ 40,000 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಕ್ವಿನ್ ಸಿಟಿ ಅಭಿವೃದ್ಧಿಗೆ ನಿರ್ಧಾರ. ಇದರಿಂದ 80,000 ಉದ್ಯೋಗ ಸೃಷ್ಟಿ.
ಬಡ ವರ್ಗದ ಜನತೆಯಿಂದ ಸಾಲ ವಸೂಲಾತಿ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಯ ಬಗ್ಗೆ ರಾಜ್ಯಪಾಲರು ಉಲ್ಲೇಖ ಮಾಡಿದ್ದಾರೆ.