ಕರ್ನಾಟಕ ಬಜೆಟ್ 2025ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ. ಸದ್ಯ ಸಿಎಂ ಮಂಡಿನೋವಿನಿಂದ ಬಳಲುತ್ತಿದ್ದು, ಕುಳಿತುಕೊಂಡೇ ಬಜೆಟ್ ಭಾಷಣ ಮಾಡುತ್ತಿದ್ದಾರೆ. ಅಲ್ಲದೆ, ಈ ಸಲದ ಬಜೆಟ್ನಲ್ಲಿ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳ ನಡುವೆ ಸಮತೋಲನ ಕಂಡುಕೊಳ್ಳಬೇಕಾಗಿರುವುದು ದೊಡ್ಡ ಸವಾಲಾಗಿದೆ. ಇನ್ನೂ ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಸಲಾಗಿದೆ.
- ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗುವುದು.
- ಕೆಇಎ ಮೂಲಕ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.