ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸತ್ಯ ತಿರುಚಿ, ಹೀರೋ ಎಂಬಂತೆ ಬಿಂಬಿಸಿಕೊಳ್ತಾರೆ: ಇನ್ಸ್ಟಾದಿಂದ ಅನ್ ಫಾಲೋ ಮಾಡಿದ ದರ್ಶನ್ ಗೆ ಸುಮಲತಾ ಟಾಂಗ್!
ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್ನಲ್ಲಿನ ಕಿರಾಣಿ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದ ನಕಲಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ಮಂಜುನಾಥ ಹಾಗೂ ಲಕ್ಷ್ಮಣ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ಕೇಳುತ್ತಲೇ ಕಿರಾಣಿ ಅಂಗಡಿ ಮಾಲೀಕರು ನಕಲಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಕೊನೆಗೆ ಇವರಿಬ್ಬರು ನಕಲಿ ಅಧಿಕಾರಿಗಳು ಎಂದು ಅಂಗಡಿ ಮಾಲೀಕರಿಗೆ ತಿಳಿಯುತ್ತಿದ್ದಂತೆ ಲಕ್ಷ್ಮಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ನಕಲಿ ಅಧಿಕಾರಿ ಮಂಜುನಾಥನನ್ನು ಕಿರಾಣಿ ಅಂಗಡಿ ಮಾಲೀಕರು ಹುಬ್ಬಳ್ಳಿಯ ಘಂಟಿಕೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ನಕಲಿ ಅಧಿಕಾರಿಗಳ ಗ್ಯಾಂಗ್ಗೆ ಕಿರಾಣಿ ಅಂಗಡಿ ಮಾಲೀಕರು ರೋಸಿ ಹೋಗಿದ್ದರು. ಕಳೆದ ಕೆಲ ದಿನಗಳಿಂದ ಒಂದಲ್ಲಾ ಒಂದು ಅಂಗಡಿ ಇವರ ಟಾರ್ಗೆಟ್ ಆಗಿತ್ತು. ಅಂಗಡಿಗೆ ಹೋಗಿ, ಆಹಾರ ಇಲಾಖೆ ಅಧಿಕಾರಿಗಳು ಅಂತ ಸುಳ್ಳು ಹೇಳಿ, ಬಿಲ್ ಕೇಳುವುದು, ಲೇಬಲ್ ಬಗ್ಗೆ ವಿಚಾರಣೆ ಮಾಡುವುದು, ಅದು ಸರಿ ಇಲ್ಲ, ಇದು ಸರಿ ಇಲ್ಲ ಅಂತ ಹೇಳಿ, ಹಣ ಕೇಳುತ್ತಿದ್ದರು. ಆರೋಪಿಗಳು ಕೇವಲ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ, ಮಾಲೀಕರಿಂದ ಹಣ ವಸೂಲಿ ಮಾಡತಿದ್ದರಂತೆ. ನಕಲಿ ಅಧಿಕಾರಿಗಳ ಬಂಡವಾಳ ಬಯಲಾಗುತ್ತಲೇ ಕಿರಾಣಿ ಅಂಗಡಿ ಮಾಲೀಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.