ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾಯಿಸಿರುವುದು ಮತ್ತು ಅದರ ಫಲಾನುಭವಿಗಳ ಅಂಕಿಅಂಶಗಳೇ ಸರ್ಕಾರದ ಬಳಿ ಇಲ್ಲದಿರುವ ಕುರಿತು ಸದನದಲ್ಲಿ ಪರಿಷತ್ ಶಾಸಕ ಟಿ. ಎ.ಶರವಣ ಅವರು, ಧ್ವನಿ ಎತ್ತಿದ್ದಾರೆ. ವಿಧಾನಸಭೆ ಕಲಾಪದಲ್ಲಿಂದು ಮಾತನಾಡಿದ ಅವರು,
ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾಯಿಸಿರುವುದು ಸರ್ಕಾರ ಆ ಜನರಿಗೆ ಮಾಡಿರುವ ಅನ್ಯಾಯವಾಗಿದೆ. ಈ ಬಗ್ಗೆ ಸಚಿವರು ನೀಡಿರುವ ಅಂಕಿಅಂಶಗಳು ಆ ವರ್ಗಗಳ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಬೇಕಾದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಿರುವುದನ್ನು ಎತ್ತಿ ತೋರಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
ಯಾವುದೇ ಕಾರಣಕ್ಕೂ ಹಲ್ಲುಜ್ಜುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಇನ್ನೂ ಹೀಗೆ ಆ ಜನರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಳ್ಳುವುದು ಅವರ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಸದನದಲ್ಲಿ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಮಾತನಾಡಿ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿಯಡಿ ಹಂಚಿಕೆ ಮಾಡಿರುವ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ವಿನಿಯೋಗಿಸಲಾಗುತ್ತದೆ. ಹಾಗಾಗಿ ಹಣ ದುರುಪಯೋಗ ಮಾಡಿಕೊಂಡಿಲ್ಲ ಎಂದು ಹೇಳಿದರು.