ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್ ತಗುಲಿ 18 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ.
ಶಾಲಾ ಶೌಚಾಲಯದ ಮೇಲೆ ಕಲ್ಲೆಸೆತ; ಪ್ರಶ್ನಿಸಿದ ಯುವಕನಿಗೆ ಥಳಿಸಿದ ಪುಂಡರು
ಘಟನೆ ನಡೆದಿದ್ದು ಹೇಗೆ?
ಇಲ್ಲಿನ ನಿವಾಸಿ ನಿಸರ್ಗ ಎಂಬಾಕೆ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾರೆ. ಕರೆಂಟ್ ತಗುಲಲು ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಬೆನ್ನಲ್ಲೆ ನೆಲಕ್ಕೆ ಬಿದ್ದ ಅವರು ಅಲ್ಲಿಯೇ ಜೀವ ಕಳೆದುಕೊಂಡಿದ್ದಾರೆ. ಸ್ಥಳೀಯ ಸರ್ಕಾರಿ ಪದವೀಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಿಸರ್ಗ, ಉತ್ತಮ ವಿದ್ಯಾರ್ಥಿನಿಯಾಗಿದ್ದರು.