ಬೆಂಗಳೂರು:- ಡಿಕೆ ಶಿವಕುಮಾರ್ ಅವರು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಸ್ಪೋಟಕ ವಿಚಾರ ಹೇಳಿದ್ದಾರೆ. ಶೇ. 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ ಎಂದಿದ್ದಾರೆ.
ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ, ರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ, ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮಾಡಿರುವ ತೀರ್ಮಾನದ ಬಗ್ಗೆ ಕೇಳಿದಾಗ, ಕೇವಲ 2 ಕೋಟಿ ಮೊತ್ತಕ್ಕೆ ಮಾತ್ರ ಒಪ್ಪಿಗೆ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ನಾವು ಬೇರೆ ಯಾರ ಹಕ್ಕನ್ನು ಇಲ್ಲಿ ಕಸಿದುಕೊಳ್ಳುತ್ತಿಲ್ಲ ಅವರಿಗೂ ನಾವು ಬದುಕು ಕೊಡಬೇಕಲ್ಲವ? ಬಿಜೆಪಿಯು ಗುತ್ತಿಗೆ ಮೀಸಲಾತಿಯನ್ನು ಮತ ಬ್ಯಾಂಕ್ ರಾಜಕಾರಣ ಎನ್ನುತ್ತಿದೆ ಎಂದಾಗ, ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಾ ಇರಬೇಕು.ಆಗಲೇ ನಾವು ಗಟ್ಟಿಯಾಗವುದು ಎಂದರು.
ಬಿಬಿಎಂಪಿ ಚುನಾವಣೆಗೆ ಸರ್ಕಾರ ತಯಾರಿದೆ ಖಂಡಿತವಾಗಿ ತಯಾರಿದೆ. ಎಷ್ಟು ದಿನ ನಾವು ತಪ್ಪಿಸಿಕೊಂಡು ಇರಲು ಸಾಧ್ಯ? ಶನಿವಾರ ಬೆಂಗಳೂರು ಮಹಾನಗರ ಪಾಲಿಕೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಸಭೆಯನ್ನು ಕರೆಯಲಾಗಿದೆ. ನಂತರ ಎಲ್ಲಾ ಪಕ್ಷದವರನ್ನು ಸಭೆಗೆ ಕರೆಯಲಾಗುವುದು. ಅವರಲ್ಲಿಯೂ ಕೆಲವೊಬ್ಬರು ಅನಧಿಕೃತವಾಗಿ ಬಿಬಿಎಂಪಿ ಚುನಾವಣೆ ಕುರಿತಾಗಿ ಸಲಹೆ ನೀಡಿದ್ದಾರೆ. ಈಗ ಅಧಿಕೃತವಾಗಿ ಸಲಹೆಗಳನ್ನು ಪಡೆಯಲಾಗುವುದು