ಹಾವೇರಿ : ಸ್ವಾತಿ ಹತ್ಯೆ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಕರೆ ನೀಡಿರುವ ಮಾಸೂರು ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಗಳೆಲ್ಲಾ ಬಂದ್ ಮಾಡಲಾಗಿದ್ದು, ಎಂದಿನಂತೆ ಬಸ್ ಸಂಚಾರ ಇದೆ.
ಹಿಂದೂ ಯುವತಿ ಕೊಲೆ: ಅಪರಿಚಿತ ಶವ ಎಂದು ಅಂತ್ಯಸಂಸ್ಕಾರ ಮಾಡಿದ ಖಾಕಿ – ಜಸ್ಟೀಸ್ ಫಾರ್ ಸ್ವಾತಿ ಎಂಬ ಪೋಸ್ಟ್ ವೈರಲ್!
ಇನ್ನೂ ನಗರದ ಬಸ್ ಸ್ಟ್ಯಾಂಡ್ ಸರ್ಕಲ್ ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಭಾರೀ ಪ್ರತಿಭಟನೆ ನಡೆಸಿದರು. ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ರಟ್ಟಿಹಳ್ಳಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದರು.
ಇದೇ ವೇಳೆ ಪ್ರತಿಭಟನಾಕಾರರು, ಆರೋಪಿಗಳ ನಯಾಜ್, ವಿನಾಯಕ, ದುರ್ಗಾಚಾರಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.