ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ರನ್ಯಾ ರಾವ್ಗೆ ದಿನದಿಂದ ದಿನಕ್ಕೆ ಕಾನೂನಿನ ಕುಣಿಕೆ ಬಿಗಿಯಾಗುತ್ತಾ ಸಾಗುತ್ತಿದೆ. ಸದ್ಯ ಈ ಸ್ಮಗ್ಲಿಂಗ್ ಕೇಸ್ನ್ನು ಮೂರು ಆಯಾಮಗಳಲ್ಲಿ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಅದು ಕೂಡ ಮೂರು ತನಿಖಾ ಸಂಸ್ಥೆಗಳಿಂದ. ಮೊದಲಿಗೆ ಡಿಆರ್ಐ ಅಧಿಕಾರಿಗಳಿಂದ ಸ್ಮಗ್ಲಿಂಗ್ ಬಗ್ಗೆ ತನಿಖೆ ಶುರುವಾಗಿದೆ.
ಇನ್ನೂ ರನ್ಯಾ ಪತಿ ಜತಿನ್ ಹುಕ್ಕೇರಿ ಅವರು ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮೆಟ್ಟಿಲೇರಿದ್ದು, ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಜೊತೆಗೆ ಅರ್ಜಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.
ನೀವು ಟ್ರೈನ್ ಟಿಕೆಟ್ ಕ್ಯಾನ್ಸಲ್ ಮಾಡುತ್ತಿದ್ದೀರಾ..? ರದ್ದತಿ ಶುಲ್ಕ ನಿಯಮಗಳ ಬಗ್ಗೆ ನಿಮಗೆಷ್ಟು ಗೊತ್ತು..?
ಆರೋಪಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಬಲವಂತದ ಕ್ರಮ ಕೈಗೊಳ್ಳದಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ನ್ಯಾ.ಹೇಮಂತ್ ಚಂದನಗೌಡರ್ ಪೀಠದಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದ್ದು, ಜತಿನ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.
ಯಾವಾಗ ಆಕ್ಷೇಪಣೆ ಅರ್ಜಿ ಸಲ್ಲಿಕೆ ಮಾಡುತ್ತೀರಿ ಎಂದು ಜಡ್ಜ್ ಪ್ರಶ್ನಿಸಿದ್ದು, ಸೋಮವಾರ ಆಕ್ಷೇಪಣೆ ಸಲ್ಲಿಸುವುದಾಗಿ ಡಿಆರ್ಐ ಪರ ವಕೀಲರು ಹೇಳಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 24ಕ್ಕೆ ಮುಂದೂಡಿದ್ದು, ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.