ಬೆಂಗಳೂರು:- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗುರುವಾರ ರಾತ್ರಿ ಮಿಡ್ ನೈಟ್ ಆಪರೇಷನ್ ಮೂಲಕ ಬೆಳ್ಳಂಬೆಳಗ್ಗೆ ದಳಪತಿಗಳಿಗೆ ಶಾಕ್ ನೀಡಿದೆ.
ಹೌದು. ತಡರಾತ್ರಿ 11.30ರ ಸುಮಾರಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದೆ. ಅಕ್ಕೂರ್ ದೊಡ್ಡಿ ಶಿವಣ್ಣ ಸೇರಿ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಉಪಸ್ಥಿತರಿದ್ದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕಾರ್ಯಕರ್ತರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ದೋಸ್ತಿ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
ವಿವಿಧ ಹಗರಣಗಳ ದಾಖಲೆಗಳ ಕಳವು ಆರೋಪ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ FIR!
ಬಳಿಕ ಮಾತನಾಡಿದ ಡಿಕೆಶಿ, ಚನ್ನಪಟ್ಟಣ ಭಾಗದ 300 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈಗಾಗಲೇ ಮಾಗಡಿ, ರಾಮನಗರ, ಚನ್ನಪಟ್ಟಣ ಭಾಗದ 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿಕೊಂಡಿದ್ದಾರೆ. ಬಹುತೇಕ ಕುಮಾರಸ್ವಾಮಿ ಅವರ ಆಪ್ತರೇ ಕಾಂಗ್ರೆಸ್ ಮೆಚ್ಚಿ ಬರುತ್ತಿದ್ದಾರೆ ಎಂದರು.