ಬೆಂಗಳೂರು:– ಟ್ರಕ್ಗೆ ಡಿಕ್ಕಿ ಹೊಡೆದು ಕಾರು ಮೂರು ಪಲ್ಟಿ ಆಗಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪಾರಾಗಿದ್ದಾರೆ.
ಆಂಧ್ರಪ್ರದೇಶದಲ್ಲಿ ಇವರಿದ್ದ ಕಾರು ಅಪಘಾತವಾಗಿದ್ದು ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏ.23 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಅಪಘಾತ ಸಂಭವಿಸಿದ್ದು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ
ಏಪ್ರಿಲ್ 23 ರಂದು ಟಯೋಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್ನಲ್ಲಿ ಅನಂತಪುರ ಮತ್ತು ಕದ್ರಿ (ಆಂಧ್ರಪ್ರದೇಶ) ನಡುವೆ ಚಾಲನೆ ಮಾಡುವಾಗ ರಸ್ತೆ ಅಪಘಾತ ಸಂಭವಿಸಿದೆ
ಹೆದ್ದಾರಿಯಲ್ಲಿ ಯಾವುದೇ ಎಚ್ಚರಿಕೆ ಫಲಕಗಳಿಲ್ಲದ ಕಾರಣ ಟಿಪ್ಪರಿಗೆ ಮುಖಾಮುಖಿ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿನಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.
ನಮ್ಮ ಕಾರು ಮೂರು ಬಾರಿ ಪಲ್ಟಿಯಾಗಿದ್ದು ನಾವೆಲ್ಲರೂ ಅಪಾಯದಿಂದ ಪಾರಾಗಿದ್ದೇವೆ ಎಂದು ಹೇಳಿದ್ದೇವೆ.