ಶಿವಮೊಗ್ಗ:- ನಗರದ ಶಂಕರ ಮಠದ ರಸ್ತೆಯ ರಾಹುಲ್ ಹುಂಡೈ ಕಾರ್ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ನೋಡು ನೋಡುತ್ತಿದ್ದಂತೆ ಶೋಂ ನಲ್ಲಿ ಗ್ರಾಹಕರಗೆ ನೋಡಲು ಇಟ್ಟಿದ್ದ ಒಳಗೆ ಎರಡು ಕಾರ್ಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಪಕ್ಕದಲ್ಲಿ ಟಾಟಾ ಕಾರ್ ಶೋ ರೂಂ ಇದೆ. ಹುಂಡೈ ಶೋರೂಂ ಹತ್ತಿದ ಬೆಂಕಿಯು ಪಕ್ಕದ ಟಾಟಾ ಶೋ ಆವರಣದಲ್ಲಿ ನಿಲ್ಲಿಸಿದ್ದ ಸುಮಾರು ನಾಲ್ಕು ಕಾರ್ ಗಳು ಸುಟ್ಟು ಹೋಗಿವೆ. ಶೋ ರೂಂ ನಲ್ಲಿದ್ದ ಕಾರ್ಗೆ ಸಂಬಂಧಿಸಿದ ಬಿಡಿ ಭಾಗ ಮತ್ತು ಇತರೆ ವಸ್ತುಗಳು ಸೇರಿದಂತೆ ಒಟ್ಟು ಎರಡು ಕೋಟಿಗೂ ಅಧಿಕ ನಷ್ಟವಾಗಿದೆ.
ಸುಮಾರು ಮೂರು ಘಂಟೆಗೂ ಅಧಿಕಕಾಲ ಆಗ್ನಿಶಾಮಕ ಸಿಬ್ಬಂದಿ ಮತ್ತು ಅಧಿಕಾರಿಗಳು ಮೂರು ನಾಲ್ಕು ಅಗ್ನಿಶಾಮಕ ನಿರಂತರವಾಗಿ ಬಳಕೆ ಮಾಡಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಹುಂಡೈ ಶೋರೂಂ ನಲ್ಲಿದ್ದ ಕಾರ್ ಮತ್ತು ಬಿಡಿ ಭಾಗಗಳು ಸುಟ್ಟು ಭಸ್ಮವಾಗಿವೆ. ಅಕ್ಕಪಕ್ಕದಲ್ಲಿ ಬಡಾವಣೆ ಮತ್ತು ಪೆಟ್ರೋಲ್ ಬಂಕ್ ಇದ್ದ ಹಿನ್ನಲೆಯಲ್ಲಿ ಸಾವಿರಾರು ಜನರು ಆತಂಕಗೊಂಡು ಮನೆಯಿಂದ ಹೊರಗೆ ಬಂದಿದ್ದರು. ಬಾಗಿಲು ಹಾಕಿದ ಶೋರೂಂ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಹೊತ್ತಿಕೊಂಡಿತ್ತು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಸದ್ಯ ರಾಹುಲ್ ಹುಂಡೈ ಕಾರ್ ಶೋರೂಂ ನಲ್ಲಿ ಸದ್ಯ ಮೌನ ಆವರಿಸಿದೆ. ನಿತ್ಯ ನೂರಾರು ಗ್ರಾಹಕರು ಮತ್ತು ಉದ್ಯೋಗಸ್ಥರು ಚಟವಟಿಕೆಯಿಂದ ಕಂಡು ಬರುತ್ತಿತ್ತು. ಆದರೆ ಬೆಂಕಿಯ ಅವಘಡ ಬಳಿಕ ಶೋ ರೂಂನಲ್ಲಿ ಎಲ್ಲಿ ನೋಡಿದ್ರೂ ಸುಟ್ಟು ಕರಕಲಾಗಿರುವ ವಸ್ತುಗಳು ಕಂಡು ಬಂದಿವೆ. ರಾಹುಲ್ ಹುಂಡೈ ಮಾಲೀಕ ವಿದೇಶ ಪ್ರವಾಸದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಘಟನೆ ಪ್ರಮುಖ ಕಾರ ಮತ್ತು ನಿಖರವಾಗಿ ಆಗಿರುವ ನಷ್ಟದದ ಕುರಿತು ಸ್ಪಷ್ಟ ಮಾಹಿತಿಯು ಇನ್ನೂ ತನಿಖೆಯಿಂದ ಹೊರಬೀಳಬೇಕಿದೆ.