ಬೆಂಗಳೂರು:- ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಕಂಡಕ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಂಡಕ್ಟರ್ ಮತ್ತು ಮಹಿಳೆ ನಡುವಿನ ಗಲಾಟೆಗೆ ಕಾರಣವೇನು ಎಂಬುದರ ಕುರಿತು ಕಂಡಕ್ಟರ್ ಹೊನ್ನಪ್ಪ ಹೇಳಿಕೆ ದಾಖಲಿಸಿರುವ ಪೊಲೀಸರು, ಇದಕ್ಕೆಲ್ಲ ಉಚಿತ ಬಸ್ ಪ್ರಯಾಣವೇ ಕಾರಣವಾಗಿದೆ. ಹೌದು, ಬಿಳೆಕಳ್ಳಿ ಬಳಿ ಬಸ್ ಹತ್ತಿದ್ದ ಮಹಿಳೆಗೆ ಟಿಕೆಟ್ ನೀಡಲು ಆಧಾರ್ ಕಾರ್ಡ್ ತೋರಿಸುವಂತೆ ಕಂಡಕ್ಟರ್ ಹೇಳಿದ್ದಾರೆ. ಆದರೆ, ಎರಡು ಸ್ಟಾಪ್ ಬಂದರೂ ಯುವತಿ ತನ್ನ ಆಧಾರ್ ಕಾರ್ಡ್ ತೋರಿಸಿಲ್ಲ.
ಮಗುವಿಗೆ ಜಾಸ್ತಿ ವರ್ಕ್ ಕೊಡ್ಬೇಡಿ – ಟೀಚರ್ಸ್ ಗೆ ಪದೇ ಪದೇ ಕಾಲ್ ಮಾಡಿ ತೊಂದರೆ ಕೊಡ್ತಿದ್ದ ತಂದೆ ಅರೆಸ್ಟ್!
ಬಳಿಕ ನಿಮ್ಮ ಸ್ಟೇಜ್ ಮುಕ್ತಾಯವಾಗುತ್ತೆ ಬೇಗ ಆಧಾರ್ ಕಾರ್ಡ್ ತೋರಿಸಿ, ಇಲ್ಲದಿದ್ದರೆ ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಎಂದು ಕಂಡಕ್ಟರ್ ಸೂಚಿಸಿದ್ದಾರೆ. ಇದರಿಂದ ಕೆಂಡಾಮಂಡಲಳಾದ ಮಹಿಳೆ, ಮಾತಿಗೆ ಮಾತು ಬೆಳೆದು ಕಂಡಕ್ಟರ್ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಂಡಕ್ಟರ್ ಕೂಡ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.
ಇನ್ನು ಘಟನೆ ಬೆನ್ನಲ್ಲೇ ಕಂಡಕ್ಟರ್ನನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘ಘಟಕ -34 (ಕೊತ್ತನೂರು ದಿಣ್ಣೆ) ರ ನಿರ್ವಾಹಕರಾಗಿರುವ ಹೊನ್ನಪ್ಪ ನಾಗಪ್ಪ ಅಗಸರ್ ಕಾರ್ಯನಿರ್ವಹಿಸುತ್ತಿದ್ದು, ಇಂದು ಮಾರ್ಗ ಸಂಖ್ಯೆ 368/6 ರಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹೊರ ರಾಜ್ಯದ ಓರ್ವ ಮಹಿಳಾ ಪ್ರಯಾಣಿಕರೊಂದಿಗೆ ಟಿಕೆಟ್ ಪಡೆಯುವ ನೀಡುವ ವಿಚಾರವಾಗಿ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಿರುತ್ತಾನೆ. ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿರುವ ಹಿನ್ನೆಲೆ ಸದರಿ ಅಂತರ್ಜಾಲದ ಸುದ್ದಿಯ ಆಧಾರದ ಮೇಲೆ ಹೊನ್ನಪ್ಪ ನಾಗಪ್ಪ ಅಗಸರ್ ರನ್ನು ಅಮಾನತ್ತು ಮಾಡಲಾಗಿದೆ ಎಂದು ಮೂಲಕ ತಿಳಿಸಿದೆ.