ಉಡುಪಿ:- ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬಾಗಲಕೋಟೆ ಮೂಲದ ಸಂತೋಷ್ ಎಂಬ ಭಕ್ತನೊಬ್ಬ ಆಯತಪ್ಪಿ ಬಾವಿಗೆ ಬಿದ್ದ ಘಟನೆ ಜರುಗಿದೆ.
ನಿನ್ನೆ ಸಂಜೆ ವೇಳೆ ಶೀರಿಬೀಡು ಬಳಿ ಆವರಣದಲ್ಲಿರುವ ಬಾವಿ ಬಳಿ ಕುಳಿತಿದ್ದರು. ಈ ವೇಳೆ ಸಂತೋಷ್ ಆಯತಪ್ಪಿ ಬಾವಿಗೆ ಉರುಳಿ ಬಿದ್ದಿದ್ದಾರೆ.
ಕೂಡಲೇ ಸ್ಥಳೀಯರು ಬಾವಿಗೆ ಬಿದ್ದವನ ರಕ್ಷಣೆಗೆ ಧಾವಿಸಿದ್ದಾರೆ. ಬಾವಿಯಲ್ಲಿ ನೀರು ಕಡಿಮೆ ಇರುವ ಹಿನ್ನೆಲೆಯಲ್ಲಿ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾವಿಗೆ ಬಿದ್ದ ಸಂತೋಷ್ನ ರಕ್ಷಣೆ ಧಾವಿಸಿದ ನಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಬಾವಿಗೆ ಹಗ್ಗಇಳಿ ಬಿಟ್ಟು ಸ್ಥಳೀಯರ ಸಹಾಯದಿಂದ ಮೇಲಕ್ಕೆತ್ತಿದ್ದಾರೆ. ಬಾವಿಗೆ ರಭಸವಾಗಿ ಬಿದ್ದ ಪರಿಣಾಮ ಸಂತೋಷ್ ಗಾಯಗೊಂಡಿದ್ದು, ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.