Death: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ಬಲಿಯಾದ ರೈತ!

ಶಿವಮೊಗ್ಗ:- ತಾಲೂಕಿನ ಆಲದೇವರಹೊಸೂರು ಗ್ರಾಮದ ಹನುಮಂತಪ್ಪ ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್: ಮೊದಲು ಪೊಲೀಸರ ಮುಂದೆ ದರ್ಶನ್ ಹೇಳಿದ್ದು ಹೀಗೆ! ಅಡಿಕೆ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶೆಟ್ಟಿಹಳ್ಳಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.