ಬೆಂಗಳೂರು: ಶಾರ್ಟ್ ಸರ್ಕ್ಯೂಟ್ʼನಿಂದ ಸೋಪಾ ಸೆಟ್ ತಯಾರಿಕಾ ಗೋದಾಮಿಗೆ ಕಾಣಿಸಿಕೊಂಡ ಬೆಂಕಿ ಧಗ ಧಗ ಹೊತ್ತಿ ಉರಿಯುತ್ತಿರುವ ಬೆಂಕಿ ಈ ಹಿನ್ನೆಲೆಯಲ್ಲಿ ಅಪಾರ ಪ್ರಂಆಣದ ನಷ್ಟ ಉಂಟಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ರಾಯಸಂದ್ರ ಬಳಿ ನಡೆದ ಘಟನೆಯಾಗಿದೆ.
ಗೋದಾಮಿನಲ್ಲಿದ್ದ ಹತ್ತಿ ಸೇರಿದಂತೆ ಮಿಷನ್ಗಳು ಬೆಂಕಿಗಾಹುತಿ ಆಗಿದ್ದು ಎಲೆಕ್ಟ್ರಾನಿಕ್ ಸಿಟಿ ಸಮೀಪದ ರಾಯಸಂದ್ರ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿರುವ ಘಟನೆಯಾಗಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ
ಕ್ಷಣಾರ್ಧದಲ್ಲಿ ಇಡೀ ಗೋದಾಮಿಗೆ ವ್ಯಾಪಿಸಿದ ಬೆಂಕಿ ಬೆಂಕಿ ನಂದಿಸಿದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿಗಾಹುತಿಯಾದ ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮಾಲೀಕ ಪರಾರಿಯಾಗಿದ್ದಾನೆ . ಈ ಬಗ್ಗೆ ಪೊಲೀಸರು ಮುಂದುವರೆದ ತನಿಖೆ ನಡೆಸುತ್ತಿದ್ದಾರೆ.