ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಭಟ್ಕಳದಲ್ಲಿ (Bhatkal) ಅರಬ್ಬಿ ಸಮುದ್ರದಲ್ಲಿ (Arabian Sea) ಮೀನುಗಾರಿಕೆಗೆ (Fishing) ತೆರಳಿದ್ದ ಬೋಟ್ ಮುಳುಗಡೆಯಾಗಿದೆ.
ಅಬ್ಬರದ ಮಳೆಗೆ ಓಂ ಗಣೇಶ್ ಹೆಸರಿನ ಮಹಾದೇವ ಖಾರ್ವಿ ಎಂಬವರಿಗೆ ಸೇರಿದ ಬೋಟ್ (Boat) ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು (Fishermen) ರಕ್ಷಣೆ ಮಾಡಲಾಗಿದೆ. ಘಟನೆಯಿಂದ ಲಕ್ಷಾಂತರ ರೂ. ಹಾನಿ ಸಂಭವಿಸಿದೆ.
ಎಲೆಕೋಸನ್ನ ವಾರಕ್ಕೊಮ್ಮೆ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದ್ದು, ಬಿಸಿಲಿನ ಅಬ್ಬರಕ್ಕೆ ಇದೇ ಮೊದಲ ಬಾರಿಗೆ ವರುಣ ಕರಾವಳಿ ಭಾಗದಲ್ಲಿ ತಂಪೆರೆದಿದ್ದಾನೆ