ಬೆಂಗಳೂರು:-ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರತಿಷ್ಠಿತ ಮಹಿಳಾ ವಿದ್ಯಾಲಯವಾದ ಜ್ಯೋತಿ ನಿವಾಸ್ ಪದವಿ ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಡಳಿತ ಮಂಡಳಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರ ಸಹಯೋಗದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಏರ್ ವೈಸ್ ಮಾರ್ಷಲ್ ಕೆ.ಎನ್ ಸಂತೋಷ್ ಹಾಗೂ “ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾ”ದ ಸಂಸ್ಥಾಪಕರು ಹಾಗೂ ನಿರ್ದೇಶಕರು ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಬೃಂದ ಅಡಿಗೆ ಆಗಮಿಸಿದ್ದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಅತಿಥಿಗಳು ಮಾತನಾಡುತ್ತಾ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳು ರೂಡಿಸಿಕೊಳ್ಳುವುದರ ಬಗ್ಗೆ ಮತ್ತು ಜ್ಞಾನಾರ್ಜನೆ ಗೊಳಿಸಿಕೊಂಡು ದೇಶವನ್ನು ಕಟ್ಟುವಲ್ಲಿ ಯುವಶಕ್ತಿ ಮುಂದಾಗ ಬೇಕೆಂದು ವಿದ್ಯಾರ್ಥಿನಿಯರಲ್ಲಿ ಸ್ಪೂರ್ತಿ ತುಂಬಿದರು.
ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಮನರಂಜನೆ ಕಾರ್ಯಕ್ರಮವನ್ನು ನೀಡಿ ರಂಜಿಸಿದರು. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಮೇರಿ ಲೂಯಿಸಾ ಎಸ್,ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.