ಚಾಮರಾಜನಗರ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಯೊಬ್ಬರು ಆಪ್ತರ ಬಳಗಕ್ಕೆ ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಡಿ.ಎನ್.ನಟರಾಜು ಅವರು ಬಿಳಿಗಿರಿರಂಗನಬೆಟ್ಟದ ತಪ್ಪಲಿನ ವಡ್ಡಗೆರೆಯ ಖಾಸಗಿ ಸಭಾಂಗಣದಲ್ಲಿ ಭರ್ಜರಿ ಔತಣಕೂಟ ನಡೆಸಿದ್ದಾರೆ.
ಇನ್ನು,,ಈ ಔತಣಕೂಟದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಮುಖಂಡರು, ಅಭಿಮಾನಿ ಬಳಗ ಹಾಗೂ ಸಮುದಾಯಗಳ ಮುಖಂಡರು ಸೇರಿದಂತೆ ಸಹಸ್ರಾರು ಮಂದಿ ಭಾಗಿಯಾಗಿದ್ದಾರೆ.
ಮಟನ್,ಚಿಕನ್, ಮೊಟ್ಟೆ, ಮುದ್ದೆ, ಅನ್ನ- ಸಾರು ಸೇರಿದಂತೆ ವಿವಿಧ ಬಗೆಯ ಮಾಂಸ ಭಕ್ಷ್ಯಗಳನ್ನು ಉಣಬಡಿಸಲಾಗಿದೆ. ಕೆಲ ತಿಂಗಳುಗಳ ಹಿಂದೆಯಷ್ಟೇ ಕವಲಂದೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ತಮಗೆ ಈ ಬಾರಿ ಟಿಕೆಟ್ ಕೊಡಬೇಕೆಂದು ಪ್ರಬಲವಾಗಿ ಒತ್ತಾಯಿಸಿದ್ದರು.