ಯುವಕನಿಗೆ ಮನಬಂದಂತೆ ಥಳಿಸಿದ ಯುವಕರ ಗುಂಪು!

ಆನೇಕಲ್:- ರಾಜಧಾನಿ ಬೆಂಗಳೂರಿನ ಗೆರಟಿಗನಬೆಲೆ ಗ್ರಾಮ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಗುಂಪು ಕಟ್ಟಿಕೊಂಡು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜರುಗಿದೆ. ಜೈಲಿನಿಂದ ದರ್ಶನ್ ವಿಡಿಯೋ ಕಾಲ್ : Video ನೋಡಿ ತಾಲ್ಲೂಕಿನ ಗೆರಟಿಗನಬೆಲೆ ಗ್ರಾಮದಲ್ಲಿ ಹತ್ತಾರು ಮಂದಿ ಸೇರಿ ಓರ್ವ ಯುವಕ ಮೇಲೆ ಹಲ್ಲೆ ನಡೆಸಲಾಗಿದೆ. ಯುವಕನನ್ನ ಮಹಿಳೆ ಬಿಡಿಸಲು ಮುಂದಾದ್ರು ಗುಂಪೊಂದು ಬಿಡದೆ ಹಲ್ಲೆ ನಡೆಸಿದ್ದಾರೆ. ಹಣಕಾಸಿನ ವಿಚಾರಕ್ಕೆ ನಡೆದಿರುವ ಗಲಾಟೆ ಇದಾಗಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.