ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇದೆ ಫೆಬ್ರವರಿ 26 , 27ರಂದುಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಉದ್ಯೋಗ ಮೇಳದ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ 18005999918 ನಂಬರ್ಗೆ ಕರೆ ಮಾಡಬಹುದಾಗಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳಕ್ಕೆ ಅವಕಾಶವಿದೆ.
Bigg News: SSLC & 2nd PU ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಡಿಟೇಲ್ಸ್!
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಸ್ಕಿಲ್ ಕನೆಕ್ಟ್ ವೆಬ್ಸೈಟ್ಗೆ ಭೇಟಿ ನೀಡಿ ವಿವಿಧ ಹಂತಗಳಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚನೆ ಮಾಡಲಾಗಿದ್ದು, ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.