ಉಡುಪಿ: ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂಬುದನ್ನು ನೋಡಿ ವೋಟ್ ಹಾಕುತ್ತೇನೆ ಎಂದು ನಟ ರಕ್ಷಿತ್ ಶೆಟ್ಟಿ ಹೇಳಿದರು. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ಓಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದರು.
Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ
ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು. ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ. ಮತದಾನ ನಮ್ಮ ಹಕ್ಕು ನಮ್ಮ ಜವಾಬ್ದಾರಿ. ಮತದಾನಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ. ನನ್ನ ಊರು, ನನ್ನ ದೇಶ, ನಮ್ಮ ಜವಾಬ್ದಾರಿ, ಇದರಲ್ಲಿ ಏನೋ ಖುಷಿ ಇದೆ ಎಂದು ಅವರು ಹೇಳಿದ್ದಾರೆ.