ಸೈಕಲ್ ಗೆ ಡಿಕ್ಕಿ ಹೊಡೆದ ಲಾರಿ: ಸವಾರ ಸ್ಥಳದಲ್ಲೇ ಸಾವು!

ಬೆಂಗಳೂರು:-ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಬಾಗಲಕೋಟೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ! ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಸೈಕಲ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಹೈಗ್ರೌಂಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.