ನೆಲಮಂಗಲ:ಅಪರಿಚಿತ ವಾಹನಕ್ಕೆ ಸಿಲುಕಿ ಗಂಡು ಚಿರತೆ ಸಾವನ್ನಪ್ಪಿದ ಘಟನೆ ನೆಲಮಂಗಲದ ದಾಸನಪುರದ ಬಳಿ ಜರುಗಿದೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಚಿರತೆ ಬಂದಿತ್ತು. ಆಹಾರವರಸಿ ಗ್ರಾಮದತ್ತ ಬಂದ ಚಿರತೆಗೆ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.