ದೊಡ್ಡಬಳ್ಳಾಪುರ:- ರಸ್ತೆ ದಾಟುತ್ತಿದ್ದ ಯುವಕ ಹಿಟ್ ಆಂಡ್ ರನ್ಗೆ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಜರುಗಿದೆ.
ಖದೀರ್ ಪಾಷಾ ಮೃತ ದುರ್ದೈವಿ. ಖದೀರ್ ಪಾಷಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಮೂಟೆ ಹೊರುವ ಕೆಲಸ ಮಾಡಿಕೊಂಡಿದ್ದ ಖದೀರ್ ಪಾಷಾ ಕೆಲಸ ಮುಗಿಸಿ ವಾಪಸ್ ತೆರಳುವ ವೇಳೆ ಘಟನೆ ನಡೆದಿದೆ. ಅಪಘಾತ ಮಾಡಿ ವಾಹನ ನಿಲ್ಲಿಸದೆ ಪರಾರಿಯಾಗಿದೆ. ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)