ಚಾಮರಾಜನಗರ:- ಇಂದು ಚಾಮರಾಜನಗರ ಮೀಸಲು ಲೋಕಸಭಾ ಕ್ಚೇತ್ರದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಜರುಗಿದೆ.
ಗುಂಡ್ಲುಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರು ಕಾರ್ಯಕರ್ತರ ಸಭೆ ಉದ್ಗಾಟಿಸಿದರು. ಬಿಜೆಪಿ ಅಭ್ಯರ್ಥಿಗೆ ಮಾಜಿ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ , ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಚ ಸಿ.ಎಸ್.ನಿರಂಜನಕುಮಾರ್ ಸಾಥ್ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಚುನಾವಣಾ ಪ್ರಭಾರಿ ಫಣೀಶ್ , ಚಾಮುಲ್ ಅಧ್ಯಕ್ಷ ನಾಗೇಂದ್ರ, ಹಾಪ್ ಕಾಮ್ಸ್ ಅಧ್ಯಕ್ಚ ಕುರುಬರಹುಂಡಿಲೋಕೇಶ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ಇದೆ ವೇಳೆ ಮಾಜಿ ಸಚಿವ ಹಾಗೂ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಬಿಜೆಪಿ ಕಪ್ ನಾವು ಉಳಿಸಿಕೊಳ್ಳಬೇಕಿದೆ.ಕಳೆದ 2019 ರ ಲೋಕಸಭೆ ಚುನಾವಣೆಯಲ್ಲಿನ ಸಂಸದ ವಿ.ಶ್ರೀನಿವಾಸಪ್ರಸಾದ್ ಸ್ಥಾನವನ್ನು ಉಳಿಸಿಕೊಳ್ಳಬೇಕಿದೆ. ಈ ಬಾರಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಮ್ಮ ಪಕ್ಷದ ಸ್ಥಾನವನ್ನು ಉಳಿಸಿಕೊಳ್ಳೋಣ. ನಾವು ಗೆದ್ದಿರುವ ಬಿಜೆಪಿ ಸಂಸದ ಸ್ಥಾನದ ಕಪ್ಪನ್ನ ನಾವು ಗೆಲ್ಲಬೇಕಿದೆ ಎಂದರು.