ಹಾಸನ: ಆಲೂರು ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯು ಆಲೂರು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು ಮತ್ತು ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಆದ ಶಿವಲಿಂಗೇಗೌಡ ರವರು ಮತ್ತು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ರವರು ಹಾಗೂ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದಂತಹ ಈ ಎಚ್ ಲಕ್ಷ್ಮಣ್ ರವರು ಮಾಜಿ ಶಾಸಕರಾದ ಪುಟ್ಟೇ ಗೌಡರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಈ ಕಾರ್ಯಕ್ರಮದಲ್ಲಿ ಆಲೂರು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ಪುರಸಭೆಯಿಂದ ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಪ್ರತಿಯೊಂದು ಬೂತ್ ಮಟ್ಟದ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ನಂತರ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರುಗಳು ಕಾರ್ಯಕರ್ತರುಗಳು ಆಗಮಿಸಿದ್ದರು.
ಇದರ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿಯವರು ವಹಿಸಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೀಯುತ ಶ್ರೇಯಸ್ ಪಾಟೀಲ್ ಅವರು ಸುದ್ದಿ ವಾಹಿನಿ ಜೊತೆ ಮಾತನಾಡುತ್ತಾ ಇಂದು ಆ ಆಲೂರು ತಾಲೂಕಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ದಾರೆ ಇದರ ಉದ್ದೇಶ ಎಲ್ಲಾ ಕಾರ್ಯಕರ್ತರು ಸೇರಿಕೊಂಡು ಯಾವ ರೀತಿ ಮತ ಬೇಟೆ ಮಾಡಬೇಕು ಈ ಬಾರಿ ಸಿದ್ದರಾಮಯ್ಯನವರ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಹೆಣ್ಣು ಮಕ್ಕಳಿಗೆ ತುಂಬಾನೇ ಅನುಕೂಲ ಮಾಡಿಕೊಟ್ಟಿದೆ ಆದುದರಿಂದ ನನಗೆ ನಿಮ್ಮ ಸೇವೆಯನ್ನು ಮಾಡಲು ಅವಕಾಶ ಮಾಡಿಕೊಡಿ ದಯವಿಟ್ಟು ಅದೇ ರೀತಿ ಹಸಿದವರಿಗೆ ಅನ್ನ ನೀಡಬೇಕು ಆಗ ಅನ್ನದ ಬೆಲೆ ಏನು ಎನ್ನುವುದು ತಿಳಿಯುತ್ತದೆ. ಹಾಗೆಯೇ ಮಹಿಳೆಯರು ಕಾಂಗ್ರೆಸ್ ಬಗ್ಗೆ ತುಂಬಾನೇ ಒಲವು ತೋರಿಸುತ್ತಿದ್ದಾರೆ ಅದೇ ರೀತಿ ಈ ಬಾರಿ ಮತ ಹಾಕುವ ಮೂಲಕ ಜಯಶೀಲರಾಗಿ ಮಾಡಿದರೆ ಇಡೀ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಯಾವ ರೀತಿ ಕೆಲಸವನ್ನ ಮಾಡಬೇಕು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರವನ್ನು ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನ ಬಹುಮತದಿಂದ ಗೆಲ್ಲಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಸಭೆಯಲ್ಲಿ ನಿರ್ಣಯ ಮಾಡಲಾಯಿತು
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಶಾಂತಕೃಷ್ಣ. ಟಿಕ್ಕರಾಜು. ರಂಗೇಗೌಡ. ಪಟ್ಟಣ ಪಂಚಾಯತಿ ಸದಸ್ಯರಾದ ತಾಯಿರ ಬೇಗಂ. ಅಜ್ಜನಹಳ್ಳಿ ಲೋಕೇಶ್. ಧರ್ಮಪ್ಪ. ಹಾಗೂ ಸಾವಿರಾರುಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಇದ್ದರು