ಬಳ್ಳಾರಿ: ಜಿಲ್ಲೆಯ ತೋರಣಗಲ್ಲು ರೈಲು ನಿಲ್ದಾಣ ಪ್ರದೇಶದ 11ನೇ ವಾರ್ಡ್ನನ ಘೋರ್ಪಡೆ ನಗರದ ಎಚ್ಎಲ್ಸಿ ಕಾಲುವೆಯ ಬಳಿ ಪುರಸಭೆ ಸದಸ್ಯ ನಾಗರಾಜ ನಾಯ್ (32) ಮೇಲೆ ಅದೇ ವಾರ್ಡ್ ನಿವಾಸಿ ಶಿವಕುಮಾರ್ ಹಾಡಹಗಲೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ.
Megha Shetty: ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ..!
ನಾಗರಾಜ ನಾಯ್ಕ ಅವರಿಗೆ ತಲೆ, ಬೆನ್ನಿಗೆ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ. ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ ಎಂದು ತೋರಣಗಲ್ಲು ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರ:
ಗಾಯಳು ಸದಸ್ಯ ನಾಗರಾಜ ನಾಯ್ಕ ಹಾಗೂ ಹಲ್ಲೆ ನಡೆಸಿದ ಶಿವಕುಮಾರ್ ಇವರಿಬ್ಬರಿಗೂ ಕಳೆದ ವರ್ಷ ಚುನಾವಣೆಯ ನಂತರ ವಾರ್ಡ್ನಲ್ಲಿಯ ಚರಂಡಿಯ ವಿಚಾರವಾಗಿ ಗಲಾಟೆ ನಡೆದಿತ್ತು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿ ಎರಡೂ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಇದೇ ವಿಚಾರವಾಗಿ ಭಾನುವಾರ ಮಧ್ಯಾಹ್ನ ಕಾಲುವೆಯ ಬಳಿ ಇಬ್ಬರಿಗೂ ಜಗಳ ನಡೆದು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು. ಕೋಪಗೊಂಡ ಆರೋಪಿ ಶಿವಕುಮಾರ್ ಮಚ್ಚು ತೆಗೆದುಕೊಂಡು ಬಂದು ನಾಗರಾಜ ನಾಯ್ಕ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ