ಉಡುಪಿ:- ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಬರಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹೈದರಾಬಾದ್ ಸಂಸ್ಥೆ ಐಸಿಎಂಆರ್ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸಲು ಒಪ್ಪಿಗೆ ನೀಡಿದೆ. ಮುಂದಿನ ವರ್ಷಕ್ಕೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದರು.
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ರಾಜ್ಯದಲ್ಲಿ 2 ಸಾವಾಗಿದೆ, ಇಬ್ಬರು ಐಸಿಯುನಲ್ಲಿದ್ದಾರೆ. ರಾಜ್ಯದಲ್ಲಿ ಒಟ್ಟು 70 ಕೆಎಫ್ಡಿ ಪ್ರಕರಣ ದಾಖಲಾಗಿದೆ. ಒಟ್ಟು 20 ಸಕ್ರಿಯ ಪ್ರಕರಣಗಳು ಇವೆ. ಪರಿಹಾರ ನೀಡುವ ಬಗ್ಗೆ ಸರ್ಕಾರಿ ಮಟ್ಟದಲ್ಲಿ ಚರ್ಚೆ ಮಾಡುತ್ತೇವೆ. ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿ ಕಾರ್ಯಕ್ರಮ ಕೈಗೊಳ್ಳುತ್ತೇವೆ. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಿ ಎಂದರು.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಎಳೆ ಪ್ರಾಯದ ಹೃದಯಘಾತ ಪ್ರಕರಣ ಹೆಚ್ಚುತ್ತದೆ. ಹೃದಯಾಘಾತಕ್ಕೆ ಬೇರೆ ಬೇರೆ ಕಾರಣಗಳು ಇರುತ್ತದೆ. ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಬಿಪಿ, ಶುಗರ್ ಹೆಚ್ಚಾಗಿ ಬಾಧಿಸುತ್ತಿದೆ. ಜಂಕ್ ಫುಡ್, ಸಂಸ್ಕರಣೆ ಆದ ಆಹಾರ ಆರೋಗ್ಯಕ್ಕೆ ಒಳ್ಳೆಯದಲ್ಲ. ಯುವಕರಲ್ಲಿ ದೈಹಿಕ ಚಟುವಟಿಕೆಗಳು ಕಡಿಮೆಯಾಗಿದೆ. ಆಹಾರ, ಸಿಹಿ ಪದಾರ್ಥ ಮಾಲಿನ್ಯದಿಂದ ಹೃದಯಾಘಾತ ಬರುವ ಸಾಧ್ಯತೆ ಹೆಚ್ಚು ಎಂದರು.
ಕೋವಿಡ್ ವ್ಯಾಕ್ಸಿನ್ ಬಗ್ಗೆ ಸಂಶಯ ಪಡುವವರು ತುಂಬಾ ಜನ ಇರುತ್ತಾರೆ. ಆದರೆ ಅಧಿಕೃತ ಆದಂತಹ ಯಾವುದೇ ವರದಿಗಳು ಇಲ್ಲ. ಕೋವಿಡ್ ಬಂದವರಿಗೆ ಸಮಸ್ಯೆ ಇರುತ್ತದೆ, ಆದರೆ ವ್ಯಾಕ್ಸಿನ್ನಿಂದ ಅಲ್ಲ. ಕೋವಿಡ್ ಆಫ್ಟರ್ ಎಫೆಕ್ಟ್ ಹೃದಯಾಘಾತ ಆಗಬಹುದು. ಸುಸ್ತು ಮೈಕೈ ನೋವು ಸಮಸ್ಯೆಗಳು ಜಾಸ್ತಿಯಾಗಿ ಕಾಣಿಸಿಕೊಳ್ಳುತ್ತದೆ ಎಂದರು.