ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಡುರಸ್ತೆಯಲ್ಲೇ ಪತಿ ಪತ್ನಿ ಯನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯಾಹ್ನ ನಡೆದಿದೆ. 28 ವರ್ಷದ ಹಿಂದೂ ಹತ್ಯೆಗೊಳಗಾದ ಮಹಿಳೆ. ಈಕೆ ಪತಿ ಸೆಲ್ವಿನ್ ಫ್ರಾನ್ಸಿಸ್ ಚಾಕುವಿನಿಂದ ಕೊಲೆಗೈದ ಎಸ್ಕೇಪ್ ಆಗಿದಾನೆ.
ಹಿಂದೂ ಹಾಗೂ ಸೆಲ್ವಿನ್ ಫ್ರಾನ್ಸಿಸ್ ದಂಪತಿಯು ಕಳೆದ 12 ವರ್ಷಗಳ ಹಿಂದೆ ಪ್ರೇಮ ವಿವಾಹ ಮಾಡಿಕೊಂಡಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ವಾಸವಾಗಿದ್ದರು. ಗಂಡ ಪೇಟಿಂಗ್ ಕೆಲಸ ಮಾಡಿಕೊಂಡಿದ್ದರೆ ಹೆಂಡತಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅನೋನ್ಯವಾಗಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು.
BHEL Recruitment: ತಿಂಗಳಿಗೆ ₹ 95 ಸಾವಿರ ಸಂಬಳ..! BHELನಲ್ಲಿ ಬಂಪರ್ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಇದರಿಂದ ಮುನಿಸಿಕೊಂಡು ಕಳೆದ ಒಂದು ವರ್ಷದಿಂದ ಪತ್ನಿ ಕೋರಮಂಗಲದ ವೆಂಕಟಪುರದಲ್ಲಿದ್ದ ತಾಯಿ ಮನೆಯಲ್ಲಿ ವಾಸವಾಗಿದ್ದರು. ಕಳೆದ ಒಂದು ವರ್ಷದಿಂದಲೂ ಇಬ್ಬರ ನಡುವೆ ಗಲಾಟೆಯಾಗುತಿತ್ತು. ಇದರಿಂದ ಬೇಸತ್ತ ಹಿಂದೂ, ಇಂದು ಕೋರಮಂಗಲ ಠಾಣೆಗೆ ತೆರಳಿ ಗಂಡನ ವಿರುದ್ಧ ದೂರು ನೀಡಿದ್ದಳು. ಪೊಲೀಸರು ಸಹ ಕರೆ ಮಾಡಿ ಸೆಲ್ವಿನ್ ನನ್ನ ಠಾಣೆಗೆ ಬರುವಂತೆಯೂ ತಿಳಿಸಿದ್ದರು. ಇದರಂತೆ ಠಾಣೆ ಸಮೀಪ ಬಳಿ ಬಂದಿದ್ದ ಸೆಲ್ವಿನ್, ದೂರು ನೀಡಿ ಹೊರಬರುತ್ತಿದ್ದಂತೆ ಆಕೆಯನ್ನ ಹಿಂಬಾಲಿಸಿ ಆಕೆ ಜೊತೆ ಗಲಾಟೆ ತೆಗೆದು ಚಾಕುವಿನಿಂದ ಹಲವು ಬಾರಿ ತಿವಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಸ್ಥಳಕ್ಕೆ ದೌಡಾಯಿಸಿ ಕೋರಮಂಗಲ ಪೊಲೀಸ್ರು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಪತ್ನಿ ಶೀಲ ಶಂಕಿಸಿ ಪತ್ನಿಯನ್ನ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು ಹಂತಕನ ಶೋಧಕ್ಕಾಗಿ ವಿಶೇಷ ತಂಡ ರಚಿಸಿ ಶೋಧಕಾರ್ಯ ನಡೆಸಲಾಗುತ್ತಿದೆ.