ಮಂಡ್ಯ:- ಹೊಯ್ಸಳರ ಕಾಲದ ಶಾಸನಗಳು ಮತ್ತು ರೇಖಾಚಿತ್ರಗಳು ಇರುವ ಅಪರೂಪದ ಕಲ್ಲು ಪತ್ತೆಯಾದ ಘಟನೆ ನಾಗಮಂಗಲ ತಾಲೂಕಿನ ಮಾಚಲಘಟ್ಟ ಕುಗ್ರಾಮದ ಮಲ್ಲೇಶ್ವರ ದೇವಸ್ಥಾನದ ಬಳಿ ಜರುಗಿದೆ.
CIIL ನ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರದ ಸಂಶೋಧಕರು ನಡೆಸಿದ ಕ್ಷೇತ್ರ ಕಾರ್ಯದಲ್ಲಿ ಶಿಲೆ ಪತ್ತೆಯಾಗಿದೆ. ತಜ್ಞರ ಪ್ರಕಾರ, 16 ನೇ ಶತಮಾನದ ಶಿಲಾ ಶಾಸನವಾಗಿದ್ದು, ದುಷ್ಟಶಕ್ತಿಗಳನ್ನು ಗ್ರಾಮದಿಂದ ದೂರವಿಡಲು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ
ಚಪ್ಪಡಿ ಕಲ್ಲಿನಲ್ಲಿ ರೇಖೆಗಳನ್ನು ಕೆತ್ತಲಾಗಿದ್ದು, ಬರಹಗಳು ಮೋದಿ ಲಿಪಿಯಲ್ಲಿವೆ. ಅರ್ಧ ಶಿಲೆ (ಮೇಲಿನ ಭಾಗ) ಮಾತ್ರ ಪತ್ತೆಯಾಗಿದ್ದು, ಇನ್ನೂ ಅರ್ಧ ಕಲ್ಲು ಭೂಮಿಯೊಳಗೆ ಹುದುಗಿ ಹೋಗಿದೆ. ಹಿರಿಯ ಸಂಶೋಧನಾ ಸಹೋದ್ಯೋಗಿ ಶಶಿಧರ ಸಿಎ ಅವರು ಈ ಸಂಶೋಧನೆಯನ್ನು ನಡೆಸಿದರು. ಸಿಐಐಎಲ್ ನಿರ್ದೇಶಕ ಶೈಲೇಂದ್ರ ಮೋಹನ್ ಅವರ ಮಾರ್ಗದರ್ಶಕರಾಗಿದ್ದರು
ಈ ಕಲ್ಲಿನ ಮೇಲ್ಭಾಗದಲ್ಲಿ ದೇವತೆಯ ರೇಖಾಚಿತ್ರವಿದೆ. ಕೆಳಭಾಗದಲ್ಲಿ ವಾಸ್ತುಮಂಡಲಗಳ ರೇಖಾಚಿತ್ರಗಳಿವೆ. ಕೆಳಗಿನ ಚೌಕದಲ್ಲಿ ಒಟ್ಟು 20 ಮನೆಗಳ ಚಿತ್ರಗಳಿವೆ. “ಓಂ” ಮತ್ತು “ಹ್ರೀಂ” ನಂತಹ “ಬೀಜ ಮಂತ್ರಗಳು” ಇವೆ. ರಜೋಗುಣ, ತಮೋಗುಣ ಮತ್ತು ಸತ್ವಗುಣವನ್ನು ಸಂಕೇತಿಸುವ ತ್ರಿಶೂಲಗಳನ್ನು ಅದರ ಸುತ್ತಲೂ ಕೆತ್ತಲಾಗಿದೆ.