ದಾವಣಗೆರೆ:- ನಗರದ ನಿಟ್ಟುವಳ್ಳಿ 60 ಅಡಿ ರಸ್ತೆಯ ಆಂಜನೇಯ ದೇವಸ್ಥಾನದ ಬಳಿ ನಡುರಸ್ತೆಯಲ್ಲಿ ನೆಟ್ಟ ಕಂಬಕ್ಕೆ ಬೈಕ್ ಸವಾರ ಬಲಿಯಾದ ಘಟನೆ ಜರುಗಿದೆ.
ಗಣೇಶ್ (40) ಸಾವನ್ನಪ್ಪಿದ ವ್ಯಕ್ತಿ. ರಸ್ತೆ ನಡುವೆ ಬ್ಯಾನರ್ ಕಟ್ಟಲು ಕಂಬ ಹಾಕಲಾಗಿತ್ತು. ಅದನ್ನು ಗಮನಿಸಿದೆ ಬಂದ ಟಿಟಿ ವಾಹನ, ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬ ಮುರಿದು ಎದುರಿನಿಂದ ಬೈಕ್ ಸವಾರನ ತಲೆಯ ಮೇಲೆ ಬಿದ್ದಿದೆ. ಕೂಡಲೇ ಬೈಕ್ ಸವಾರನನ್ನು ಆಸ್ಪತ್ರೆಗೆ ಸೇರಿಸಲಾದರೂ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ನಡು ರಸ್ತೆಯಲ್ಲಿಕಂಬ ನೆಟ್ಟವರ ವಿರುದ್ದ ಜನರು ಆಕ್ರೋಶ ಹೊರ ಹಾಕಿದ್ದು, ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇನ್ನು ಘಟನೆ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.