ಜತೆಗೆ, ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ
ಮೆಟ್ರೋ ಬಳಿಕ ಮಾಲ್ʼನಲ್ಲೂ ರೈತರಿಗೆ ಅವಮಾನ: ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದ ಸಿಬ್ಬಂದಿ!
ಈ ವಿಚಾರವಾಗಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಂಎನ್ ಅನುಚೇತ್ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ಗೆ ದಾರಿ ಮಾಡುವಾಗ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಕ್ಯಾಮರಾಗಳ ದೃಶ್ಯ ಆಧರಿಸಿ ದಂಡ ವಿಧಿಸಿದ ಉದಾಹರಣೆಗಳಿವೆ. ಇದಕ್ಕೆ ಭಯಪಡಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಏನು ಮಾಡಬೇಕು ಎಂದೂ ತಿಳಿಸಿದ್ದಾರೆ.
ಸಿಗ್ನಲ್ ಜಂಪ್ಗಾಗಿ ಚಲನ್ಗಳನ್ನು ಪಡೆದ ಪ್ರಯಾಣಿಕರು ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯ ಗಮನಕ್ಕೆ ತರಬಹುದು ಎಂದು ಎಂಎನ್ ಅನುಚೇತ್ ತಿಳಿಸಿದ್ದಾರೆ. ಅಥವಾ ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಅಪ್ಲಿಕೇಶನ್ ಮೂಲಕ ಮನವಿ ಮಾಡಬಹುದು ಎಂದೂ ತಿಳಿಸಿದ್ದಾರೆ.
ಕ್ಯಾಮರಾ ಹೊಂದಿರುವ ಪ್ರತಿ ಸಿಗ್ನಲ್ನಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಐದು ಸೆಕೆಂಡುಗಳ ಕಾಲ ಚಟುವಟಿಕೆಗಳು ರೆಕಾರ್ಡ್ ಆಗುತ್ತವೆ. ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವುದಕ್ಕಾಗಿ ನಿಯಮ ಉಲ್ಲಂಘಿಸಿದ್ದು ಕಂಡುಬಂದಲ್ಲಿ ತಕ್ಷಣವೇ ವಾಹನ ಸವಾರರ ಮೇಲಿನ ದಂಡ ರದ್ದುಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.