ಕಲಘಟಗಿ : ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಆಟೋ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಟೋದಲ್ಲಿದ್ದ ಚಾಲಕನ ಮಗಳು ಹಾಗೂ ಮಗನಿಗೂ ಗಾಯಗಳಾಗಿವೆ.
ಆಟೋ ಚಾಲಕ ಕಲಘಟಗಿ ಮೂಲದವನಾಗಿದ್ದು ಗಣೇಶ ಭಾಪಶೇಟ್ ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯಲ್ಲಿ ವಾಸವಾಗಿದ್ದ ಇವರು ಮಕ್ಕಳನ್ನು ಕರೆದುಕೊಂಡು ಕಲಘಟಗಿ ಬಂದು ಹೋಗುತ್ತಿರುವಾರ ಪಟನೆ ಸಂಭವಿಸಿಗೆಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದು ತನಿಖೆ ನಡೆಸಿದ್ದಾರೆ.
✍ ವರದಿ: ಮಾರುತಿ ಲಮಾಣಿ