ಗದಗ:- ಜಿಲ್ಲೆ ನರಗುಂದ ತಾ. ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ.
ಕರ್ನಾಟಕದಲ್ಲಿ ಮುಂಗಾರು ಚುರುಕು: 1 ವಾರ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಮೃತರು.
ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.