ಬೆಂಗಳೂರು:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಒತ್ತಡ ಹೇರಿರುವ ಆರೋಪದಡಿ ಇಬ್ಬರು ಇಡಿ ಆಫೀಸರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಲು ನಟಿಯರ ಜೊತೆ ಅಫೇರ್ ಇಟ್ಟುಕೊಳ್ಳಬೇಕು: ಮಾಜಿ ಕ್ರಿಕೆಟಿಗನ ಸ್ಪೋಟಕ ಹೇಳಿಕೆ!
ಮಿತ್ತಲ್ ಹಾಗೂ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿಗಮದ ಹಿಂದಿನ ಜಂಟಿ ನಿರ್ದೇಶಕ ಕಲ್ಲೇಶ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶೇಷಾದ್ರಿಪುರಂ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದ್ದು, ವಿಲ್ಸನ್ ಗಾರ್ಡನ್ ಠಾಣೆಗೆ ವರ್ಗಾವಣೆ ಬಳಿಕ FIR ದಾಖಲಾಗಿದೆ.
ಯಾವುದೇ ತಪ್ಪು ಮಾಡದಿದ್ದರೂ ಕಾನೂನು ಬಾಹಿರವಾಗಿ ಇಡಿ ಅಧಿಕಾರಿ ವಿಚಾರಣೆ ಮಾಡಿದ್ದಾರೆ. ಬೈದು, ನನ್ನ ಮೇಲೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ ಮಾಡಲಾಗಿದೆ.
ಎಂ.ಜಿ ರೋಡ್ ಖಾತೆಗೆ ಹಣವನ್ನು ಸಿಎಂ ಸಿದ್ದರಾಮಯ್ಯ, ನಾಗೇಂದ್ರ ಮತ್ತು ಎಫ್ಡಿ ನಿರ್ದೇಶನದಂತೆ ಮಾಡಿರುತ್ತೇನೆಂದು ಹೇಳುವಂತೆ ಒತ್ತಡ ಇತ್ತೆಂದು ಬರೆದು ಕೊಡುವಂತೆ ಸೂಚಿಸಿದ್ದು, ಸಿಎಂ, ನಾಗೇಂದ್ರ ಸೂಚನೆ ಇತ್ತೆಂದು ಒಪ್ಪಿಕೊ. ಒಪ್ಪಿಕೊಳ್ಳದಿದ್ರೆ ಬಂಧಿಸ್ತೇವೆಂದು ಭಯ ಹುಟ್ಟಿಸಿದ ಆರೋಪ ಮಾಡಲಾಗಿದೆ. ಹೀಗಾಗಿ FIR ದಾಖಲಾಗಿದೆ.