ಬೆಂಗಳೂರು:– ಹಿಟ್ ಆ್ಯಂಡ್ ರನ್ಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಗರದ ರೈಲ್ವೆ ಅಂಡರ್ಪಾಸ್ ಬಳಿ ಜರುಗಿದೆ.
ವಾಹನಕ್ಕೆ ಸಿಲುಕಿ ಅನಾಮಿಕ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ತಗ್ಗಿದ ಡೆಂಗ್ಯೂ ಹಾವಳಿ: ಆದರೂ ಎಚ್ಚರಿಸಿದ ಆರೋಗ್ಯ ಇಲಾಖೆ!
ಇನ್ನು ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ. ಮುಂಜಾನೆ ಸುಮಾರು 5 ಗಂಟೆಗೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.