ರಾಮನಗರ:- ಸರಿಯಾಗಿ ಕೆಲಸಕ್ಕೆ ಬರದ ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಕೆಲಸ ಮಾಡಿಸಿಕೊಂಡ ಘಟನೆ ಮೆಹಬೂಬ ನಗರದ ಎಸ್ಐಯು ರೇಷ್ಮೆ ಕಾರ್ಖಾನೆಯಲ್ಲಿ ಜರುಗಿದೆ.
ಕೆಲಸದ ಅವಧಿ ಮುಗಿದ ನಂತರವು ಆತನನ್ನು ಮನೆಗೆ ಕಳುಹಿಸದೆ ಕಾರ್ಖಾನೆಯಲ್ಲಿಯೇ ಸರಪಳಿ ಕಟ್ಟಿ ಕೂಡಿ ಹಾಕಿದ್ದು, ಜೀತದಾಳು ರೀತಿ ಹಗಲು ರಾತ್ರಿ ಕೆಲಸ ಮಾಡಿಸಿಕೊಂಡಿದ್ದಾರೆ.
ಮುಂಗಡವಾಗಿ ಸಾಲ ಪಡೆದಿದ್ದ ಕಾರ್ಮಿಕ ಸರಿಯಾಗಿ ಕೆಲಸಕ್ಕೆ ಬರಲಿಲ್ಲ ಎಂದು ಕೋಪಗೊಂಡಿದ್ಡ, ಇಲ್ಲಿನ ಮೆಹಬೂಬ ನಗರದ ಎಸ್ಐಯು ರೇಷ್ಮೆ ಕಾರ್ಖಾನೆಯ ಮಾಲೀಕರು ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಕೆಲಸ ಮಾಡಿಸಿಕೊಂಡಿದ್ದಾರೆ.
ಸಹ ಕಾರ್ಮಿಕರು ನೀಡಿದ ದೂರಿನ ಮೇರೆಗೆ ರಾಮನಗರ ಪುರ ಠಾಣೆ ಪೊಲೀಸರು ಸೋಮವಾರ ಸಂಜೆ ಕಾರ್ಖಾನೆ ಮೇಲೆ ದಾಳಿ ನಡೆಸಿದ್ದಾರೆ. ಕಾರ್ಖಾನೆಯಲ್ಲಿ ಕೂಡಿ ಹಾಕಲಾಗಿದ್ದ ಮೊಹಮ್ಮದ್ ವಸೀಂ (24) ಎಂಬ ಕಾರ್ಮಿಕನನ್ನು ರಕ್ಷಿಸಿದ್ದಾರೆ.
ಮಾಲೀಕ ಸಯ್ಯದ್ ಇಸಾಮ್ ಮತ್ತು ಮೇಲ್ವಿಚಾರಕ ಸಯ್ಯದ್ ಅಮ್ಜದ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಬಂಧಿಸಿದ್ದಾರೆ.