ಚೆನ್ನೈ:- ಗೂಳಿ ಎದೆಗೆ ಗುದ್ದಿ ಯುವಕ ಸಾವನ್ನಪ್ಪಿದ ಘಟನೆ ಜರುಗಿದೆ.
Shivakumar: ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ: ಡಿಕೆ ಶಿವಕುಮಾರ್!
ತಮಿಳುನಾಡಿನಲ್ಲಿ ಮಂಜುವಿರಟ್ಟು ಅಥವಾ ಜಲ್ಲಿಕಟ್ಟು ಎಂದೂ ಕರೆಯಲಾಗುವ ಸಾಂಪ್ರದಾಯಿಕ ಕ್ರೀಡೆಯನ್ನು ನೋಡಲು ಸುತ್ತಲೂ ಜನರು ಸೇರಿದ್ದರು. ಈ ವೇಳೆ 28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ.
ಈ ವೇಳೆ ತೀವ್ರ ಗಾಯವಾಗಿ ಸಾವನ್ನಪ್ಪಿದ್ದಾನೆ. ತಮಿಳುನಾಡಿನ ಶಿವಗಂಗೆಯ ಕಾರೈಕುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಗೂಳಿ ಪಳಗಿಸುವ ಕಾರ್ಯಕ್ರಮವಾದ ಮಂಜುವಿರಟ್ಟು ವೇಳೆ 28 ವರ್ಷದ ವ್ಯಕ್ತಿಯೊಬ್ಬ ಗೂಳಿಯ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಈ ತ್ತು ಹೋರಿಗಳನ್ನು ಕರೆತರಲಾಗಿತ್ತು. ಪ್ರತಿ ಗೂಳಿಯನ್ನು ಸುಮಾರು 30 ನಿಮಿಷಗಳ ಕಾಲ ನೆಲದ ಮೇಲೆ ಬಿಡಲಾಯಿತು. 9 ಜನರು ಅದನ್ನು ಪಳಗಿಸಲು ಪ್ರಯತ್ನಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಧುರೈ, ತಿರುಚ್ಚಿ, ರಾಮನಾಥಪುರಂ, ಪುದುಕೊಟ್ಟೈ ಸೇರಿದಂತೆ ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು.