ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂಗೆ (Dengue) 27 ವರ್ಷದ ಯುವಕ ಬಲಿಯಾಗಿರುವುದನ್ನು ಬಿಬಿಎಂಪಿ ಮಾಹಿತಿ ಹೊರಹಾಕಿದೆ.
ಸಾಮಾಜಿಕ ಜಾಲತಾಣ ಎಷ್ಟು ವೇಗ ಇದ್ದಾವೋ ಅಷ್ಟೇ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ಹೆಲ್ತ್ ಆಡಿಟ್ (Health Audit) ದೃಢಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯೂ ಶಂಕಿತ ಸಾವು ಪ್ರಕರಣಗಳು ಸಂಭವಿಸಿತ್ತು. ಆ ಪೈಕಿ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯೂ ಕಾರಣ. ಆದರೆ 80 ವರ್ಷದ ವೃದ್ಧೆಯ ಸಾವಿಗೆ ಡೆಂಗ್ಯೂ ಕಾರಣವಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. 80ರ ವೃದ್ಧೆಯ ಸಾವಿಗೆ ಕಾರಣ ಕ್ಯಾನ್ಸರ್ ಎಂದೂ ಬಿಬಿಎಂಪಿ ಹೆಲ್ತ್ ಆಡಿಟ್ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.
ಹೊಸದಾಗಿ 213 ಡೆಂಗ್ಯೂ ಪ್ರಕರಣಗಳ ಪತ್ತೆಯಾಗಿದೆ. ಜೂನ್ ತಿಂಗಳಲ್ಲಿ 1,742 ಜನ ಡೆಂಗ್ಯೂ ಸೊಂಕಿಗೆ ಒಳಗಾದಂತಾಗಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯೂ ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎಂದು ಹೆಲ್ತ್ ಆಡಿಟ್ ತಿಳಿಸಿದೆ. ಗರ್ಭಿಣಿಯರು ಡೆಂಗ್ಯೂ ಸೋಂಕಿಗೆ ಹೆಚ್ಚು ಬೇಗ ಒಳಗಾಗುತ್ತಿದ್ದು, ಎಚ್ಚರ ವಹಿಸಲು ತಿಳಿಸಿದೆ.