ತುಮಕೂರು:- ನಗರದ ದೇವರಾಯಪಟ್ಟಣದಲ್ಲಿ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
36 ವರ್ಷದ ಕಮಲೇಶ್ ಮೃತ ದುರ್ದೈವಿ. ನವೆಂಬರ್ 17ರಂದು ವಿಷ ಸೇವಿಸಿದ್ದರು, ಮಂಗಳವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ನ.21 ಮತ್ತು 22ರಂದು ವಿವಾಹ ನಡೆಯಬೇಕಿತ್ತು. ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ನಿಶ್ಚಿತಾರ್ಥದ ಸಮಯದಲ್ಲಿ ನೀಡಿದ್ದ ಉಂಗುರ ಕಳೆದುಕೊಂಡಿದ್ದರು. ಇದನ್ನು ಮನೆಯವರಿಗೆ ತಿಳಿಸಲು ಹೆದರಿ ವಿಷ ಸೇವಿಸಿದ್ದರು
![](https://ainlivenews.com/wp-content/uploads/2024/01/Ad-Banner-copy-scaled.jpg)