ಕೋಲಾರ:- ನಗರದ ಅಂತರಗಂಗೆ ರಸ್ತೆಯಲ್ಲಿ ಮುಸ್ಲಿಂ ಮಹಿಳೆಯನ್ನು ಬೈಕ್ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ.
ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಅಜ್ಜಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ!
ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಮಾಡಿ ವೈರಲ್ ಮಾಡಿರುವ ಯುವಕರ ವಿರುದ್ದ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.