ಬೆಂಗಳೂರು: ರಾಮೇಶ್ವರಂ ಕೆಫೆ ಪ್ರಕರಣಕ್ಕೆ (Rameshwaram Cafe Blast) ಸ್ಫೋಟಕ ಟ್ಬಿಸ್ಟ್ ಸಿಕ್ಕಿದ್ದು, ಕೇಸ್ನಲ್ಲಿ ಈಗಾಗಲೇ ಇಬ್ಬರ ಬಂಧನ ಮಾಡಲಾಗಿದೆ. ಆಶ್ಚರ್ಯವಾದರೂ ಇದು ನಿಜವಾದ ಸಂಗತಿ.
ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ!
ಶಿವಮೊಗ್ಗದಲ್ಲಿ ಟ್ರಯಲ್ ಬಾಂಬ್ ಸ್ಫೋಟ (Shivamogga Trial Blast) ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾಝ್ ಮುನೀರ್ನನ್ನೇ (Maaz Muneer) ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರುವ ಮೊದಲೇ ಕೆಲವೊಂದು ಕಡೆ ಸ್ಫೋಟಕ್ಕೆ ಪ್ಲ್ಯಾನ್ ಮಾಡಿದ ಹಿನ್ನೆಲೆಯಲ್ಲಿ ಆತನನ್ನೇ ಎ1 ಆರೋಪಿಯನ್ನಾಗಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್ ಮುನೀರ್ನನ್ನು ಎನ್ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.
ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರೋ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.