ನವದೆಹಲಿ:- ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ ಎಂದು ರಾಜನಾಥ್ ಸಿಂಗ್ ಆರೋಪ ಮಾಡಿದ್ದಾರೆ.
ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಾದ ಧೋರಣೆ ಅನುಸರಿಸಿದರೂ ಹಲವು ರಾಜ್ಯಗಳು ಇದರಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದರು.
ನಿರ್ಬಂಧ ಇದ್ದರೂ ಪಿಓಪಿ ಗಣಪತಿ ತಯಾರು ಮಾಡ್ತಿದ್ದವರಿಗೆ ಬಿಸಿ ಮುಟ್ಟಿಸಿದ ಪಾಲಿಕೆ!
ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಮಹಿಳೆಯರ ಸುರಕ್ಷತೆ ಸಂಬಂಧ ಸರ್ಕಾರದ ಪ್ರಯತ್ನಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು.
ತಮ್ಮ ಭಾಷಣದಲ್ಲಿ ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಘಟನೆ ಹೃದಯ ವಿದ್ರಾವಕ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಅಪರಾಧಗಳನ್ನು ಪರಿಗಣಿಸಿದರೆ, ಎಲ್ಲಾ ಬದಲಾವಣೆಗಳ ಹೊರತಾಗಿಯೂ, ಬಹಳಷ್ಟು ಮಾಡಬೇಕಾಗಿದೆ ಎಂದು ತೋರುತ್ತದೆ. ನಮ್ಮ ಸರ್ಕಾರವು ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕಟ್ಟುನಿಟ್ಟಾದ ಧೋರಣೆ ಅನುಸರಿಸಿದೆ, ಆದರೆ ಅನೇಕ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು.
ಅತ್ಯಾಚಾರದಂತಹ ಘೋರ ಅಪರಾಧಗಳಿಗೆ ಮರಣದಂಡನೆ ವಿಧಿಸಲು ನರೇಂದ್ರ ಮೋದಿ ಸರ್ಕಾರ ಕಾನೂನನ್ನು ತಿದ್ದುಪಡಿ ಮಾಡಿದೆ. ಐಪಿಸಿಯನ್ನು ಬದಲಿಸಿ ಭಾರತೀಯ ನ್ಯಾಯ ಸಂಹಿತಾ ಕಾನೂನಿನಲ್ಲಿ ಅತ್ಯಾಚಾರದಲ್ಲಿ ಬಲಿಪಶುವಿನ ಸಾವಿಗೆ ಕಾರಣವಾದ ಪ್ರಕರಣಗಳಲ್ಲಿ ಮರಣದಂಡನೆಗೆ ಅವಕಾಶ ನೀಡಿದೆ. ಹರಿಯಾಣದಂತಹ ರಾಜ್ಯಗಳಲ್ಲಿ ಲಿಂಗ ಅನುಪಾತದಲ್ಲಿ ಸುಧಾರಣೆಗಾಗಿ ಪ್ರಧಾನಿ ಮೋದಿಯವರ ‘ಬೇಟಿ ಬಚಾವೋ, ಬೇಟಿ ಪಢಾವೋ ‘ ಅಭಿಯಾನ ಆರಂಭಿಸಿದೆ. ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರವಾಗಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.