ಮಂಡ್ಯ:- ಅಧಿಕಾರ ದುರುಪಯೋಗ ಆರೋಪ ಸಂಬಂಧ ಪಾಂಡವಪುರ ಎಸಿ ಅಮಾನತು ಮಾಡಲಾಗಿದೆ.
ಪಾಂಡವಪುರ ಉಪವಿಭಾಗದ ಉಪವಿಭಾಗಾಧಿಕಾರಿ ಎಲ್.ಎಂ.ನಂದೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
“ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತು ರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”!
ಫೆ.28 ರಂದು ಮೈಸೂರು ಉಪವಿಭಾಗದ ಪ್ರಭಾರ ಉಪವಿಭಾಗಧಿಕಾರಿಯಾಗಿ ಎಲ್.ಎಂ.ನಂದೀಶ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಎದುರುದಾರರಿಗೆ ವಿಚಾರಣೆಗೆ ಅವಕಾಶ ಕಲ್ಪಿಸದೆ, ಅವರಿಂದ ದಾಖಲೆಗಳನ್ನು ಪಡೆದುಕೊಳ್ಳದೆ, ವಿಚಾರಣೆಗೆ ತೆಗೆದುಕೊಂಡ ದಿನದಂದೇ ಆದೇಶ ಹೊರಡಿಸಿದ್ದರು.
ಜೊತೆಗೆ ಪಕ್ಷಕಾರರು ಅವರ ನಿಲುವುಗಳನ್ನು ಮಂಡಿಸಲು ಅವಕಾಶ ನೀಡದೆ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದ ಆರೋಪ ಹೊತ್ತಿದ್ದರು. ಈ ಆರೋಪಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಇತ್ಯಾರ್ಥಪಡಿಸಿ, ಅಪ್ಲೋಡ್ ಮಾಡಲಾಗಿರುವ 46ರ ಪೈಕಿ ಕೆಲವು ಪ್ರಕರಣಗಳು ಸರ್ಕಾರದ ಹಿತಾಸಕ್ತಿಗೆ ಒಳಪಟ್ಟಿರುವುದನ್ನು ಗಮನಿಸಿದ್ದರೂ, ದಾಖಲೆಗಳನ್ನು ಮಂಡಿಸಲು ತಹಸೀಲ್ದಾರ್ ಅವರಿಗೆ ಅವಕಾಶ ನೀಡದೇ ಆದೇಶ ಹೊರಡಿಸಲಾಗಿದೆ.