ಕೋಲಾರ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಭ್ರಷ್ಟಾಚಾರ ಆಡಳಿತ ವೈಖರಿಯ ಬದಲಾವಣೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಸಂಘದಿಂದ ಪ್ರತಿಭಟನೆಯನ್ನು ನಡೆಸಿದರು.
Muda Scam: ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ: ಪ್ರಿಯಾಂಕ್ ಖರ್ಗೆ!
ನಗರದ ಹೊರವಲಯದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆಯನ್ನು ನಡೆಸಿದ ಅವ್ರು, ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಬದ್ದತೆಯ ಕೊರತೆಯಿಂದ ವಿದ್ಯಾರ್ಥಿಗಳ ಭವಿಷ್ಯವೇ ಸಂಕಷ್ಟದಲ್ಲಿದೆ. ವಿಶ್ವವಿದ್ಯಾಲಯಗಳು ಕೇವಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವುದಕ್ಕೆ ಮಾತ್ರ ಸೀಮಿತವಾಗಿದೆ.
ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷ ನೀಡಿ ಅವರ ಭವಿಷ್ಯವನ್ನು ರೂಪಿಸಬೇಕು ಎಂದು ಆಗ್ರಹಿಸಿದರು. ಇದೇ ಸಂಧರ್ಭದಲ್ಲಿ ಪ್ರಾಂತ ಕಾರ್ಯದರ್ಶಿ ಪ್ರವೀಣ್, ಬೆಂಗಳೂರು ಗ್ರಾಮಾಂತರ ವಿಭಾಗ ಸಂಘಟನಾ ಕಾರ್ಯದರ್ಶಿ ಶಿವಾನಂದ ಕಾಂಬ್ಳೆ, ವಿಭಾಗ ಸಂಚಾಲಕ ಮನೋಜ್ ಎಂ, ಎಸ್ ಇ ಸಿ ಸದಸ್ಯ ದರ್ಶನೆಸ್, ಅರ್ಛನ, ಪವಿತ್ರ,ಅನನ್ಯ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.