ದೊಡ್ಡಬಳ್ಳಾಪುರ: ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ತಾಲೂಕಿನ ಗ್ರೀನ್ ವ್ಯಾಲಿ ಬಳಿ ನಡೆದಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಯರ್ರಗುಂಟೆ ನಿವಾಸಿಗಳಾದ ಶಿವು, ಆನಂದ್ ಘಟನೆಯಲ್ಲಿ ಗಾಯಗೊಂಡವರು.ಕಾರನ್ನು ಓವರ್ ಟೇಕ್ ಮಾಡುವ ಬರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…
![](https://ainlivenews.com/wp-content/uploads/2024/01/Ad-Banner-copy-scaled.jpg)