ಬಳ್ಳಾರಿ:– ಜಿಂದಾಲ್ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು 3 ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ಜರುಗಿದೆ.
ಮಂಗಳೂರು: ಆನ್ಲೈನ್ ವಂಚನೆ…1.60 ಕೋಟಿ ರೂ. ಕಳೆದುಕೊಂಡ ವೃದ್ಧ..!
ಜೆಡೆಪ್ಪ, ಸುಶಾಂತ, ಮಹಾದೇವನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್ನಲ್ಲಿ ಸಮಸ್ಯೆ ಕಂಡು ಬಂದಿತ್ತು. ಪೈಪ್ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ. ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ. ತೋರಣಗಲ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.